ಮಂಡ್ಯ ಏ. 1, ನ್ಯೂಸ್ ಎಕ್ಸ್ ಪ್ರೆಸ್: ರಿಯಲ್ ಸ್ಟಾರ್ ಉಪೇಂದ್ರ ಇಂದು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವ್ಯಾಪಾರಿ ರಾಜಕಾರಣ ತೊಲಗಿಸಿ, ಪ್ರಜಾಕಾರಣ ತರುವ ಉದ್ದೇಶ ನಮ್ಮದು. ಮ್ಯಾನಿಫೆಸ್ಟೋ ಅನ್ನೋದು ಕೋರ್ಟ್ನಲ್ಲಿ ರಿಜಿಸ್ಟರ್ ಆಗಬೇಕು ಎಂದು ಹೇಳಿದ್ದಾರೆ.
ಜನರಿಗೆ ಕೆಲಸ ಮಾಡುವ ಉದ್ದೇಶದಿಂದ ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ ನೀಡಿದ್ದೇವೆ. ಇನ್ನೂ 14 ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಆಗಬೇಕಿದೆ. ರೋಡ್ ಶೋಗಳ ಮೇಲೆ ನಮಗೆ ನಂಬಿಕೆ ಇಲ್ಲ. ಮುಂದಿನ ಪೀಳಿಗೆಗಾದರೂ ಪ್ರಜಾಕಾರಣಬೇಕು. ವಿಚಾರವೇ ಪ್ರಚಾರವಾಗಬೇಕು. ಬಲಿಷ್ಠವಾದ ಜನರ ಕೈಯಲ್ಲಿದೆ ಪ್ರಸ್ತುತ ರಾಜಕಾರಣ.
ಜಾತಿ, ಹಣ ರಾಜಕೀಯ ಹೋಗಲಾಡಿಸುವ ಪ್ರಯತ್ನ ನಮ್ಮದು. ಪ್ರಯತ್ನವೇ ಮಾಡದಿದ್ದರೆ ರಾಜಕೀಯದಲ್ಲಿ ಬದಲಾವಣೆ ಹೇಗೆ ಸಾಧ್ಯ. ಪ್ರಸಕ್ತ ರಾಜಕೀಯ ಮಲಿನಗೊಂಡಿದೆ ಎಂದು ಉಪೇಂದ್ರ ಹೇಳಿದರು.