ವಾಕಿಂಗ್ ಹೋದಾಗ್ಲೇ ಕಾಡಾನೆ ದಾಳಿ

ವಾಕಿಂಗ್ ಹೋದಾಗ್ಲೇ ಕಾಡಾನೆ ದಾಳಿ

ರಾಮನಗರ, ಡಿ. 25 : ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ನಾರಾಯಣಪುರದಲ್ಲಿ ಕಾಡಾನೆ ದಾಳಿಗೆ ಯುವಕ ಬಲಿಯಾಗಿದ್ದಾರೆ. ಟಿ. ಬೇಕುಪ್ಪೆ ನಿವಾಸಿ ಚೇತನ್(25) ಮೃತಪಟ್ಟವರೆಂದು ಹೇಳಲಾಗಿದೆ.
ಚೇತನ್ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಚೇತನ್ ಅವರನ್ನು ತುಳಿದು ಸಾಯಿಸಿದೆ. ಈ ಭಾಗದಲ್ಲಿ ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಸುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಕನಕಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos