ವಯನಾಡಿನಲ್ಲಿ ರಾಹುಲ್ ಅಲೆ ಎಬ್ಬಿಸಲು ರಮ್ಯ ರೆಡಿ..!

ವಯನಾಡಿನಲ್ಲಿ ರಾಹುಲ್ ಅಲೆ ಎಬ್ಬಿಸಲು ರಮ್ಯ ರೆಡಿ..!

ವಯನಾಡ್, ಏ. 12, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದಲ್ಲಿ ಯಾವೊಬ್ಬ ಕಾಂಗ್ರೆಸ್ ಅಭ್ಯರ್ಥಿ ಪರವೂ ಪ್ರಚಾರಕ್ಕೆ ಬಾರದ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರು, ಸದ್ಯ ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪರ ಪ್ರಚಾರ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಮಂಡ್ಯದ ಮಾಜಿ ಸಂಸದೆ, ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿದಿದ್ದ ರಮ್ಯಾ 2018ರ ವಿಧಾನಸಭಾ ಚುನಾವಣೆಯ ವೇಳೆ ಪ್ರಚಾರಕ್ಕೆ ಬಂದಿರಲಿಲ್ಲ. ಹೀಗಾಗಿ ಈ ಬಾರಿ ಪ್ರಚಾರಕ್ಕೆ ಬರುತ್ತಾರಾ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಚುನಾವಣೆಯ ದಿನಾಂಕ ಹತ್ತಿರ ಬಂದರೂ ರಮ್ಯಾ ಮಾತ್ರ ರಾಜ್ಯದ ಕಡೆ ತಲೆ ಹಾಕಿಲ್ಲ. ಹೀಗಾಗಿ ರಮ್ಯಾ ಈಗ ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ರಮ್ಯಾ ಈಗ ಕೇರಳದಲ್ಲಿ ರಾಹುಲ್ ಪರ ಪ್ರಚಾರ ನಡೆಸುತ್ತಿದ್ದಾರೆ. ರಮ್ಯಾ ಈಗ ವಯನಾಡಿನಲ್ಲಿ ಸೋಷಿಯಲ್ ಮೀಡಿಯಾ ಟೀಮ್ ಜೊತೆ ಫುಲ್ ಬ್ಯುಸಿಯಾಗಿದ್ದಾರೆ. ಲೋಕಸಭಾ ಚುನಾವಣೆಗೆ ವಯನಾಡಿನಿಂದ ರಾಹುಲ್ ಗಾಂಧಿ ಅವರು ಸ್ಪರ್ಧಿಸುತ್ತಿರುವ ಹಿನ್ನೆಲೆ ರಾಹುಲ್ ಗೆಲುವಿಗೆ ಸಾರಥಿಯಾಗಿ ಸದ್ಯ ರಮ್ಯಾ ಅವರು ನಿಂತಿದ್ದಾರೆ. ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಟೀಂ ಜೊತೆ ವಯನಾಡಿನಲ್ಲಿ ಠಿಕಾಣಿ ಹೂಡಿರುವ ರಮ್ಯಾ, ಟೀಂ ಜೊತೆ ಮೀಟಿಂಗ್ ಮೇಲೆ ಮೀಟಿಂಗ್, ಚರ್ಚೆ ಮಾಡುವಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಲೋಕಸಮರದ ಹಿನ್ನೆಲೆ ವಯನಾಡಿನಲ್ಲಿ ರಾಹುಲ್ ಅಲೆ ಎಬ್ಬಿಸಲು ರಮ್ಯಾ ಸಜ್ಜಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್ 18 ರಂದು ಬೆಂಗಳೂರಿನ ನವ ಉದ್ಯಮಿಗಳ ಜೊತೆ ಮಾನ್ಯತಾ ಟೆಕ್ ಪಾರ್ಕಿನಲ್ಲಿ ರಾಹುಲ್ ಜೊತೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಮ್ಯಾ ಕಾಣಿಸಿಕೊಂಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos