ಬೆಂಗಳೂರು: ನಮ್ಮ ಶಾಸಕರುಗಳ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಯಾವುದೇ ಕಾರಣಕ್ಕೂ ಯಾರೂ ಬಿಜೆಪಿ ಸೇರುವುದಿಲ್ಲ. ಸಮ್ಮಿಶ್ರ ಸರಕಾರ ಸ್ಥಿರವಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಇಂದು ಅಶೋಕ್ ಹೋಟೆಲ್ನಲ್ಲಿ ಕರೆದಿದ್ದ ಕಾಂಗ್ರೆಸ್ನ ಎಲ್ಲಾ ಸಚಿವರ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡರು ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅದು ಯಶ ಕಾಣುವುದಿಲ್ಲ. ದೇವಸ್ಥಾನಕ್ಕೋ ಅಥವಾ ಇತರೆ ಕಾರಣಕ್ಕೆ ನಮ್ಮ ಶಾಸಕರು ಮುಂಬೈಗೆ ತೆರಳಿರಬಹುದು. ಯಾವ ಕಾರಣಕ್ಕೆ ಎಂಬುದು ನಮಗೆ ಗೊತ್ತಿಲ್ಲ. ಅದನ್ನು ಬೇರೆ ರೀತಿಯಲ್ಲಿ ವಿಶ್ಲೇಷಿಸುವುದು ಬೇಡ ಎಂದರು.
ಕಾಂಗ್ರೆಸ್ನ ಯಾವ ಶಾಸಕರು ಬಿಜೆಪಿ ಸೇರುತ್ತೇವೆ ಎಂದು ಹೇಳಿಕೆ ನೀಡಿಲ್ಲ. ಅನಗತ್ಯವಾಗಿ ತಪ್ಪಾರ್ಥ ಮಾಡಿಕೊಳ್ಳುವುದು ಬೇಡ. ನಮ್ಮಶಾಸಕರ ಮೇಲೆ ನಮಗೆ ವಿಶ್ವಾಸವಿದೆ ಎಂದು ವಿಶ್ವಸ ವ್ಯಕ್ತಪಡಿಸಿದರು.