ಪರೀಕ್ಷಾ ಕೇಂದ್ರಕ್ಕೆ ಸಚಿವ ಭೇಟಿ

ಪರೀಕ್ಷಾ ಕೇಂದ್ರಕ್ಕೆ ಸಚಿವ  ಭೇಟಿ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಾಕಷ್ಟು ಆತಂಕ, ಭಯದಿಂದ ಆರಂಭವಾಗಿ ಸುಸೂತ್ರವಾಗಿ ನಡೆದು ಅಂತಿಮ ಘಟ್ಟಕ್ಕೆ ಬಂದಿದೆ. ಶುಕ್ರವಾರ ನಡೆಯಲಿರುವ ತೃತೀಯ ಭಾಷಾ ಪರೀಕ್ಷೆ ಕೊನೆಯದ್ದಾಗಿದೆ. ಈ ನಡುವೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅನೇಕಲ್ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಅನೇಕಲ್‌ನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಸುರಕ್ಷೆ ಸೇರಿ ಇತರೆ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಪರೀಕ್ಷಾ ಕೇಂದ್ರದಲ್ಲಿದ್ದ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.

ಫ್ರೆಶ್ ನ್ಯೂಸ್

Latest Posts

Featured Videos