ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ವಿಜಯಮಾಲೆ ಯಾರ ಕೊರಳಿಗೆ?

ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ವಿಜಯಮಾಲೆ ಯಾರ ಕೊರಳಿಗೆ?

ಗೋಕಾಕ್ , ಡಿ. 05: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ನಡೆಯುತ್ತಿದ್ದು, ಸಹೋದರರು ಪರಸ್ಪರ ಎದುರಾಳಿಯಾಗಿರುವ ಗೋಕಾಕ್ ಕ್ಷೇತ್ರ ಎಲ್ಲರ ಗಮನ ಸೆಳೆದಿದೆ. ಕಳೆದ ಬಾರಿ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿದ್ದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದು, ಅವರ ಸಹೋದರ ಲಖನ್ ಜಾರಕಿಹೊಳಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದಾರೆ. ಇನ್ನು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅಶೋಕ್ ಪೂಜಾರಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ವಿಜಯಮಾಲೆ ಯಾರ ಕೊರಳಿಗೆ ಬೀಳಲಿದೆ ಎಂಬುದು ಡಿ. 9ರ ಫಲಿತಾಂಶದ ದಿನದಂದು ಗೊತ್ತಾಗಲಿದೆ. ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ರಮೇಶ್ ಜಾರಕಿಹೊಳಿಯವರ ಪಾತ್ರ ಮಹತ್ವದ್ದಾಗಿದ್ದು, ಹೀಗಾಗಿಯೇ ಈ ಪಕ್ಷಗಳ ನಾಯಕರು ರಮೇಶ್ ಜಾರಕಿಹೊಳಿ ಸೋಲಿಗಾಗಿ ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos