ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರಲ್ಲಾ: ಸಿಎಂ

ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರಲ್ಲಾ: ಸಿಎಂ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಸುದ್ದಿಯೊಂದು ಜೋರಾಗಿ ಹರಿದಾಡುತ್ತಿದೆ. ಅದು ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಹೋಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕೈ ತೊರೆದು ಮತ್ತೆ ಕಮಲ ಕೈಹಿಡಿಯುತ್ತಾರೆ ಎನ್ನುವುದು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗಲ್ಲ ಎಂದು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶೆಟ್ಟರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಲ್ಲ, ಅವರು ಬಿಜೆಪಿ ಸೇರ್ಪಡೆ ವದಂತಿ ಸುಳ್ಳು ಎಂದಿದ್ದಾರೆ. ‌

ಜಗದೀಶ್ ಶೆಟ್ಟರ್ ದೆಹಲಿಯಲ್ಲಿ ಅಮಿತ್‌ ಷಾ ಅವರನ್ನು ಭೇಟಿಯಾಗಿದ್ದಾರೆ ಲೋಕಸಭಾ ಚುನಾವಣೆ ಸಮೀಕ್ಷೆ ಸಮೀಪಿಸುತ್ತಿರುವ ಬೆನ್ನಲ್ಲಿ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಮಾಜಿ ಸಿಎಂ ಕಾಂಗ್ರೆಸ್ ಜಗದೀಶೆಟ್ಟಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos