ಬೆಂಗಳೂರು: ಭಾರತದ ಅತ್ಯಂತ ದೊಡ್ಡ ಟೂರ್ನಿ ಎಂದರೆ ಅದು ನಮ್ಮ ಐಪಿಎಲ್ ಟೂರ್ನಿ ಈ ಐಪಿಎಲ್ ಎಂದರೆ ನಮಗೆ RCBನೇ ಮೊದಲು ನೆನಪಾಗುವುದು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದರೆ ಇದು ಬರೀ ತಂಡವಾಗಿ ಉಳಿದಿಲ್ಲಾ ಇದು ನಮ್ಮ ಎಮೋಷನ್ ಆಗಿದೆ. 16 ಸೀಸನ್ ಗಳಲ್ಲಿ ಒಂದು ಬಾರಿಯೂ ಕಪ್ ಗೆದಿಲ್ಲಾ ಆದರೆ ಯಾವತ್ತಿಗೂ ಅಭಿಮಾನಿಗಳು RCB ತಂಡವನ್ನು ಬಿಟ್ಟುಕೊಟ್ಟಿಲ್ಲಾ.
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಂದು ಶುರುವಾಗಲಿರುವ ಐಪಿಎಲ್ ಸೀಸನ್-17 ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇತ್ತ ಐಪಿಎಲ್ ವೇಳಾಫಟ್ಟಿ ಪ್ರಕಟವಾದ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಸಲ ಕಪ್ ಗೆಲ್ಲುವುದನ್ನು ಎದುರು ನೋಡುತ್ತಿದ್ದೇನೆ ಎಂದು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ತಿಳಿಸಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ಆರ್ಸಿಬಿ ಟ್ರೋಫಿಯನ್ನು ಗೆಲ್ಲಬೇಕೆಂದು ನಾನು ಬಯಸುತ್ತೇನೆ. ಈ ಕಾಯುವಿಕೆಯ ಸಮಯ ಮೀರಿದೆ ಎಂದೇ ಹೇಳಬಹುದು. ಕಳೆದ ಸೀಸನ್ನಲ್ಲಿ ಸಿಎಸ್ಕೆ ಗೆದ್ದಿದೆ. ಆದರೆ ಈ ವರ್ಷ ಇದುವರೆಗೆ ಕಪ್ ಗೆಲ್ಲದ ತಂಡ ಚಾಂಪಿಯನ್ ಪಟ್ಟಕ್ಕೇರಬೇಕು ಎಂದು ನಾನು ಬಯಸುತ್ತೇನೆ ಎಂದು ಸುರೇಶ್ ರೈನಾ ಹೇಳಿದ್ದಾರೆ.
ವಿರಾಟ್ ಕೊಹ್ಲಿ ಕಳೆದ 16 ಸೀಸನ್ಗಳಿಂದಲೂ ಕಠಿಣ ಪರಿಶ್ರಮಪಟ್ಟಿದ್ದಾರೆ. ಹೀಗಾಗಿ ಈ ಬಾರಿ ಕೊಹ್ಲಿ ಮತ್ತು ಆರ್ಸಿಬಿ ತಂಡ ಕಪ್ ಗೆಲ್ಲಲು ಅರ್ಹರು ಎಂದು ನಾನು ಭಾವಿಸುತ್ತೇನೆ. ಅದರಂತೆ ಈ ಸಲವಾದರೂ ಆರ್ಸಿಬಿ ಚಾಂಪಿಯನ್ ಪಟ್ಟಕ್ಕೇರಲಿ ಎಂದು ಸುರೇಶ್ ರೈನಾ ಹೇಳಿದರು.
ಇದೀಗ ಆರ್ಸಿಬಿ 17ನೇ ಸೀಸನ್ ಆರಂಭಕ್ಕೆ ಸಜ್ಜಾಗಿ ನಿಂತಿದೆ. ಈ ಬಾರಿಯಾದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆಲ್ಲುವ ಮೂಲಕ 16 ವರ್ಷಗಳ ಸುದೀರ್ಘ ಕಾಯುವಿಕೆಯನ್ನು ಅಂತ್ಯಗೊಳಿಸುವ ವಿಶ್ವಾಸದಲ್ಲಿದ್ದಾರೆ ಆರ್ಸಿಬಿ ಅಭಿಮಾನಿಗಳು.