ಏಕದಿನ: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ

ಏಕದಿನ: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ

ಬೆಂಗಳೂರು: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ನಿರ್ಣಾಯಕ ಪಂದ್ಯವು ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸದ್ಯ ಎರಡೂ ತಂಡಗಳು ಸರಣಿಯಲ್ಲಿ 1-1ರಲ್ಲಿ ಸಮಬಲ ಸಾಧಿಸಿವೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತ ಎದುರು ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಈಗಾಗಲೇ ಉಭಯ ತಂಡಗಳು  ತಲಾ ಒಂದು ಪಂದ್ಯ ಜಯಿಸಿದ್ದು, ಈ ಪಂದ್ಯ ಗೆದ್ದ ತಂಡವು ಸರಣಿ ಜಯಿಸಲಿದೆ. ಹೀಗಾಗಿ ಈ ಪಂದ್ಯವು ಸಾಕಷ್ಟು ಪೈಪೋಟಿಯಿಂದ ಕೂಡಿರುವ ಸಾಧ್ಯತೆಯಿದೆ.

ಭಾರತ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದ್ದು, ಆರ್‌ಸಿಬಿ ಕ್ರಿಕೆಟಿಗ ರಜತ್ ಪಾಟೀದರ್ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಋತುರಾಜ್ ಗಾಯಕ್ವಾಡ್‌ ಕೈಬೆರಳಿನ ಗಾಯಕ್ಕೆ ಒಳಗಾಗಿದ್ದು, ಅವರ ಬದಲಿಗೆ ರಜತ್ ಪಾಟೀದರ್‌ಗೆ ಭಾರತ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿದೆ. ಇನ್ನು ಸತತ ಕ್ರಿಕೆಟ್ ಆಡುತ್ತಾ ಬಂದಿರುವ ಕುಲ್ದೀಪ್ ಯಾದವ್‌ಗೆ ಮೂರನೇ ಪಂದ್ಯದಿಂದ ರೆಸ್ಟ್ ನೀಡಲಾಗಿದ್ದು, ಕುಲ್ದೀಪ್ ಬದಲಿಗೆ ಯುಜುವೇಂದ್ರ ಚಹಲ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿದೆ. ಇನ್ನು ದಕ್ಷಿಣ ಆಫ್ರಿಕಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

 

ಫ್ರೆಶ್ ನ್ಯೂಸ್

Latest Posts

Featured Videos