ಕತ್ತಿ ಸಹೋದರರ ಬಳಿ ಸಂಧಾನಕ್ಕೆ ಮುಂದಾದ ಯಡಿಯೂರಪ್ಪ

ಕತ್ತಿ ಸಹೋದರರ ಬಳಿ ಸಂಧಾನಕ್ಕೆ ಮುಂದಾದ ಯಡಿಯೂರಪ್ಪ

ಬೆಳಗಾವಿ, . 1, ನ್ಯೂಸ್ ಎಕ್ಸ್ ಪ್ರೆಸ್: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯುರಪ್ಪ ಇಂದು ಬೆಳಗಾವಿಗೆ ಉಮೇಶ್ ಕತ್ತಿ ಬಳಿ ಸಂಧಾನಕ್ಕೆ ಆಗಮಿಸಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ರಮೇಶ್ ಕತ್ತಿಗೆ ಟಿಕೆಟ್ ನಿರಾಕರಿಸಿರುವ ಕಾರಣ ಉಮೇಶ್ ಕತ್ತಿ ಗರಂ ಆಗಿದ್ದಾರೆ.

ಸಹೋದರ ರಮೇಶ್ ಕತ್ತಿಗೆ ಟಿಕೆಟ್ ತಪ್ಪಿದ್ದಕ್ಕೆ ಹೊಸ ತಂತ್ರವೊಂದನ್ನು ರೂಪಿಸಿ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಲಿದ್ದೇನೆ ಎಂದಿರುವ ಶಾಸಕ ಉಮೇಶ್ ಕತ್ತಿ ಗುಟ್ಟು ಬಿಟ್ಟು ಕೊಡದೆ ಯಾವುದಕ್ಕೂ ಕಾದು ನೋಡುವ ತಂತ್ರ ಅನುಸರಿಸಿದ್ದಾರೆ.

ಯುಗಾದಿಯ ಮುನ್ನವೇ ರಾಜ್ಯ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಲಿದೆ.ಇನ್ನೊಂದೆಡೆ ಬಿಜೆಪಿಗೆ ಭರ್ಜರಿ ಶಾಕ್ ಆಗುವ ಸಂಗತಿ ಏನೆಂದರೆ ಚಿಕ್ಕೋಡಿಯಲ್ಲಿ ಕಾಂಗ್ರೆಸ್ನ ಅಧಿಕೃತ ಅಭ್ಯರ್ಥಿಯಾಗಿ ರಮೇಶ್ ಕತ್ತಿಯನ್ನು ಕಣಕ್ಕಿಳಿಸಲು ಪ್ರಯತ್ನ ನಡೆದಿದೆ ಎನ್ನುವ ಮಾಹಿತಿ ಕೂಡ ಲಭ್ಯವಾಗಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos