ಮಂಗಳೂರು, ಮೇ. 29, ನ್ಯೂಸ್ ಎಕ್ಸ್ ಪ್ರೆಸ್: ಯಕ್ಷಗಾನ ಕಲಾವಿದರಿಗೆ ಮಾಸಾಶನ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಮಂಗಳೂರಿನ ಮಂಗಳ ಸ್ಟೇಡಿಯಂ ನಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಯಕ್ಷ ಧ್ರುವ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಯಕ್ಷಗಾನ ಕಲಾವಿದರಿಗೆ 6 ತಿಂಗಳು ಕೆಲಸ. ರೀತಿ ಉಳಿದ 6 ತಿಂಗಳು ಕೆಲಸವಿರುವುದಿಲ್ಲ. ಹೀಗಾಗಿ ಯಕ್ಷಗಾನ ಕಲಾವಿದರಿಗೆ ಮಳೆಗಾಲದ ಸಂದರ್ಭದಲ್ಲಿ ಸರ್ಕಾರದಿಂದ ಮಾಸಾಶನ ನೀಡುವ ಚಿಂತನೆ ಇದ್ದು, ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ