ಯಶ್ ತಮ್ಮ ಊರಿಗೂ ಪ್ರಚಾರಕ್ಕೆ ಬರಲೇಬೇಕೆಂದು ದುಂಬಾಲು-ಪ್ರತಿಭಟನೆ!

ಯಶ್ ತಮ್ಮ ಊರಿಗೂ ಪ್ರಚಾರಕ್ಕೆ ಬರಲೇಬೇಕೆಂದು ದುಂಬಾಲು-ಪ್ರತಿಭಟನೆ!

ಬೆಂಗಳೂರು, ಏ. 4, ನ್ಯೂಸ್ ಎಕ್ಸ್ ಪ್ರೆಸ್: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರ ವಾಹನ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಸಮೀಪದ ಚಿನ್ನೇನಹಳ್ಳಿ ಗ್ರಾಮಸ್ಥರು ನಮ್ಮ ಊರಿಗೆ ಪ್ರಚಾರಕ್ಕೆ ಬನ್ನಿ ಎಂದು ಸಬ್ಬನಕುಪ್ಪೆ ಕ್ರಾಸ್ ಬಳಿ ಪ್ರತಿಭಟನೆ ನಡೆಸಿದ್ದಾರೆ.

ನಿಗದಿಯಾಗಿರುವಂತೆ ಯಶ್ ಇಂದು ಚಿನ್ನೇನಹಳ್ಳಿ ಗ್ರಾಮಕ್ಕೆ ಪ್ರಚಾರಕ್ಕೆ ತೆರಳಬೇಕಿತ್ತು. ಆದರೆ, ಸಮಯದ ಅಭಾವದ ಕಾರಣ, ಅವರು ಮುಂದೆ ಸಾಗಿದ್ದು, ನಮ್ಮ ಊರಿಗೆ ಪ್ರಚಾರಕ್ಕೆ ಬನ್ನಿ ಎಂದು ಗ್ರಾಮಸ್ಥರು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಅಂಬರೀಶ್ ಅವರು ನಮ್ಮ ಊರಿಗೆ ಪ್ರಚಾರಕ್ಕೆ ಬಂದಿದ್ದರು. ನೀವು ಪ್ರಚಾರಕ್ಕೆ ಬನ್ನಿ ಎಂದು ಹೇಳಿದ್ದಾರೆ. ಪ್ರತಿಭಟನೆ ನಡೆಸಿದವರನ್ನು ಸಮಾಧಾನಪಡಿಸಿದ ಯಶ್ ಪ್ರಚಾರಕ್ಕೆ ಬರುವುದಾಗಿ ಹೇಳಿದ್ದಾರೆ. ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದವರನ್ನು ಚದುರಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos