ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಓರ್ವ ಗೂಂಡಾ, ರೌಡಿ ಎಂದು ಮಾಜಿ ಶಾಸಕ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಚಾಮರಾಜನಗರದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ಲೋಕಸಭಾ ಚುನಾವಣೆ ಸಂಬಂಧ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಓರ್ವ ಗುಂಡಾ, ರೌಡಿ. ಗುಜರಾತ್ನಲ್ಲಿ ನರಮೇದ ಮಾಡಿದ ಆರೋಪ ಹೊತ್ತಿದ್ದಾರೆ ಅವರು. ದೇಶದ ಉನ್ನತ ಸ್ಥಾನದಲ್ಲಿದ್ದು, ಇಂತಹವರನ್ನ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.
2 ಕೋಟಿ ಉದ್ಯೋಗ ಸೃಷ್ಠಿ ಅಂತ ಕೇಂದ್ರ ಸರ್ಕಾರ ಹೇಳಿತ್ತು. ಆದರೆ, ಕೆಲಸ ಎಲ್ಲಿ ಸಿಕ್ತು? ನಿರೋದ್ಯೋಗಿಗಳಿಗೆ ಉದ್ಯೋಗ ಸೃಷ್ಠಿ ಮಾಡೋದು ಕೇಂದ್ರ ಸರ್ಕಾರದವರು ನಮ್ಮ ಹೊಣೆ ಅಲ್ಲ ಅಂತಾ ಈಗ ಹೇಳ್ತಾರೆ. ಇನ್ನು ಕಪ್ಪು ಹಣ ವಾಪಸ್ಸು ತರುತ್ತೇವೆ ಅಂದಿದ್ದರು. ತಂದ್ರಾ? ಅಟ್ ಲೀಸ್ಟ್ ಸ್ವಿಸ್ ಬ್ಯಾಂಕ್ನಲ್ಲಿ ಯಾರದೆಲ್ಲಾ ಖಾತೆಯಿದೆ ಅಂತಾ ಪಟ್ಟಿ ಕೂಡ ರಿಲೀಸ್ ಮಾಡ್ಲಿಲ್ಲ. ಮತ್ತೊಂದೆಡೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಗೆ ಮಾಡಿ ಬಡ ಜನರ ಹೊಟ್ಟೆ ಮೇಲೆ ಬರೆ ಎಳೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.