ಸಿಎಂ ಸಿದ್ದರಾಮಯ್ಯನಿಗೆ ಮುಳುವಾಯ್ತಾ ಮಗ ಯತೀಂದ್ರನ ಹೇಳಿಕೆ..!

ಸಿಎಂ ಸಿದ್ದರಾಮಯ್ಯನಿಗೆ ಮುಳುವಾಯ್ತಾ ಮಗ ಯತೀಂದ್ರನ ಹೇಳಿಕೆ..!

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವರುಣಾ ಕ್ಷೇತ್ರದ ಮಡಿವಾಳ ಸಮಾಜದವರಿಗೆ ಇಸ್ತ್ರಿ ಪೆಟ್ಟಿಗೆ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನವನ್ನೇ ಮೂಡಿಸಿದೆ. ಡಾ ಯತೀಂದ್ರ ಹೇಳಿಕೆಯ ಬೆನ್ನಲ್ಲೇ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ರೆಡಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಅಥವಾ ಮುಖ್ಯಮಂತ್ರಿ ಸ್ಥಾನಕ್ಕೆ ಮಗನ ಹೇಳಿಕೆಯಿಂದ ಕುತ್ತು ಬರಬಹುದೇನೋ ಎನ್ನುವ ಆತಂಕ ಸೃಷ್ಟಿಯಾಗಿದೆ.
ಇನ್ನು ಈ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಇದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕಂಟಕ ತರುತ್ತಾ ಎನ್ನುವ ಪ್ರಶ್ನೆಗಳು ಹುಟ್ಟಿಸಿವೆ. ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಬಿಜೆಪಿ ಅಸ್ತ್ರವನ್ನಾಗಿಸಿಕೊಂಡು ಚುನಾವಣಾ ಆಯೋಗಕ್ಕೆ ದೂರು ನೀಡಲು ಸಿದ್ಧವಾಗಿದೆ.
ಇನ್ನು ಚುನಾವಣಾ ವೇಳೆ ಮತದಾರರಿಗೆ ಹಣ, ಮದ್ಯ, ಉಡುಗೊರೆ ನೀಡುವುದು ಕಾನೂನು ಬಾಹಿರ,ಒಂದು ವೇಳೆ ಉಡುಗೊರೆ ನೀಡಿದ್ದೇ ನಿಜವಾದರೆ ಅದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ.ಈ ಸಂಬಂಧ ಭಾರತೀಯ ಜನತಾ ಪಾರ್ಟಿ ದೂರು ನೀಡಲು ಮುಂದಾಗಿದೆ. ಮತ್ತು ಇದಕ್ಕೆ ಬೇಕಾಗುವ ಸಂಪೂರ್ಣ ಮಾಹಿತಿಯ ದಾಖಲೆಗಳುನ್ನು ಹುಡುಕುವ ತಯಾರಿ ನಡೆಸಿದ್ದಾರೆ ಎಂದು ತಿಳಿದಿದೆ.

ವರದಿಗಾರ
ಎ ಚಿದಾನಂದ

ಫ್ರೆಶ್ ನ್ಯೂಸ್

Latest Posts

Featured Videos