ಹಾವೇರಿ, ಏ. 3, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಲ್ಲಿ ಮಂಡ್ಯ ಕ್ಷೇತ್ರದಲ್ಲಿ ಯಶ್-ದರ್ಶನ್ ಪ್ರಚಾರದಿಂದ ಸುಮಲತಾ ಅವರಿಗೆ ಲಾಭವಾಗಲಿದೆ ಅಂತ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ಅವರು ಹೇಳಿದ್ದಾರೆ.
ಬಿ.ಸಿ. ಪಾಟೀಲ್ ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡ ಸೇರಿ ಹಲವು ನಾಯಕರು ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತವಾಗಿ ಪರಿವರ್ತನೆಗೊಳ್ಳುವುದಿಲ್ಲ ಎನ್ನುವ ಹೇಳಿಕೆಗೆ ಸಂಬಂಧಪಟ್ಟಂತೆ ಮಾತನಾಡಿರುವ ಅವರು ಚಿತ್ರನಟರ ಪ್ರಚಾರದಿಂದ ಜನಬೆಂಬಲ ವೋಟುಗಳಾಗಿ ಪರಿವರ್ತನೆಗೊಳ್ಳುವ ಬಗ್ಗೆ ಜನರು ತೀರ್ಮಾನಿಸುತ್ತಾರೆ ಅಂತ ಹೇಳಿದರು.
ಇನ್ನು ದರ್ಶನ್ ಮತ್ತು ಯಶ್ ಅವರು ನಿರಂತರವಾಗಿ ಜನರೊಂದಿಗೆ ಸಂಪರ್ಕ ಮತ್ತು ಒಡನಾಟ ಹೊಂದಿದ್ದಾರೆ. ಇದು ಮತಗಳಾಗಿ ಪರಿವರ್ತನೆಗೊಳ್ಳುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು