ಸಿದ್ದುಗೆ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಸಿದ್ದುಗೆ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಶಿರಸಿ, ನ. 28: ಅನರ್ಹ ಶಾಸಕರನ್ನು ಯಡಿಯೂರಪ್ಪ ದುಡ್ಡು ಕೊಟ್ಟು ಖರೀದಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸುತ್ತಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ರವಾನಿಸಿದ್ದಾರೆ.

ಯಲ್ಲಾಪುರ ವಿಧಾನಸಭಾ ಕ್ಷೇತ್ರದ 2ನೇ ಸುತ್ತಿನ ಪ್ರಚಾರಕ್ಕೆ ಮುಂಡಗೋಡಿಗೆ ಆಗಮಿಸಿದ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿ, ಕೋರ್ಟ್ ಗೆ ಪಕ್ಷದ ಕಡೆಯಿಂದ ದೂರು ದಾಖಲಿಸುತ್ತೇನೆ. ಹಗುರವಾಗಿ ಮಾತನಾಡುವ ಮುನ್ನ ಮಾಜಿ ಸಿಎಂಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ವಿಚಾರ ಮಾಡಬೇಕು ಎಂದರು.

ಜೆಡಿಎಸ್, ಕಾಂಗ್ರೆಸ್ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. 3, 3 ತಿಂಗಳಿಗೆ ಚುನಾವಣೆಗೆ ಹೋಗುವುದು ಅವರ ಕುತಂತ್ರ. ಯಾವುದೇ ಶಕ್ತಿಯಿಂದ ಬಿಜೆಪಿ 15 ಸೀಟು ಗೆಲ್ಲುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಸಿಎಂ ಸವಾಲು ಹಾಕಿದರು.

 

ಫ್ರೆಶ್ ನ್ಯೂಸ್

Latest Posts

Featured Videos