ಏ.14ಕ್ಕೆ ಚಾಮರಾಜನಗರದಲ್ಲಿ ಹಿಂದೂ ಫೈರ್ ಬ್ರಾಂಡ್ ಯೋಗಿ ಆದಿತ್ಯನಾಥ್!

ಏ.14ಕ್ಕೆ ಚಾಮರಾಜನಗರದಲ್ಲಿ ಹಿಂದೂ ಫೈರ್ ಬ್ರಾಂಡ್ ಯೋಗಿ ಆದಿತ್ಯನಾಥ್!

ಚಾಮರಾಜನಗರ, ಏ. 5, ನ್ಯೂಸ್ ಎಕ್ಸ್ ಪ್ರೆಸ್: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಚಾಮರಾಜನಗರದಲ್ಲಿ ಪ್ರಚಾರ ಕೈಗೊಳ್ಳುತ್ತಾರಂತೆ. ಈ ಮೂಲಕ ಮತ ಬೇಟೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಿಂದೂ ಫೈರ್ ಬ್ರಾಂಡ್ ಎಂದೇ ಕರೆಯಿಸಿಕೊಳ್ಳುವ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಚಾಮರಾಜನಗರದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಉನ್ನತ ಮೂಲಗಳು ‘ಈಟಿವಿ ಭಾರತ’ಕ್ಕೆ ತಿಳಿಸಿವೆ.

ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬಹಿರಂಗ ಸಭೆ ನಡೆಸಲಿದ್ದು, ಯೋಗಿ ಆದಿತ್ಯನಾಥ್ ಚಾಮರಾಜನಗರ ಇಲ್ಲವೇ ಸಂತೇಮರಹಳ್ಳಿಯಲ್ಲಿ ಎ.14 ರಂದು ಸಮಾವೇಶ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಹಿಂದೂ ಫೈರ್ ಬ್ರಾಂಡ್ ಎಂದೇ ಹೆಸರಾದ ಯೋಗಿ ಆದಿತ್ಯನಾಥ್ ಜಿಲ್ಲೆಯಲ್ಲಿನ ಮತ ಬೇಟೆಗಾಗಿ ಬರುತ್ತಿದ್ದು, ಈ ಪ್ರಚಾರ ವಿ.ಶ್ರೀಗೆ ದೊಡ್ಡ ಪ್ಲಸ್​ ಪಾಯಿಂಟ್​ ಆಗಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ನರೇಂದ್ರ ಮೋದಿ ಸ್ಟಾರ್ ಕ್ಯಾಂಪೇನರಾಗಿದ್ದರು. ಈ ಬಾರಿ ಮೋದಿ ಮೈಸೂರಿಗೆ ಬರಲಿದ್ದು, ಯೋಗಿ ಗಡಿ ಜಿಲ್ಲೆಯಲ್ಲಿ ಜನರನ್ನು ಹಿಡಿದಿಡುವ ಪ್ರಯತ್ನ ಮಾಡಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos