ತೀವ್ರ ಎದೆನೋವು ಹಿನ್ನೆಲೆಯಲ್ಲಿ ವೈ.ಎಸ್.ವಿ.ದತ್ತ ಆಸ್ಪತ್ರೆಗೆ ದಾಖಲು

ತೀವ್ರ ಎದೆನೋವು ಹಿನ್ನೆಲೆಯಲ್ಲಿ ವೈ.ಎಸ್.ವಿ.ದತ್ತ ಆಸ್ಪತ್ರೆಗೆ ದಾಖಲು

ಬೆಂಗಳೂರು: ತೀವ್ರ ಎದೆನೋವು ಹಿನ್ನೆಲೆಯಲ್ಲಿ ನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಹಾಗೂ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಚೇತರಿಸಿಕೊಳ್ಳುತ್ತಿದ್ದಾರೆ.

ಕಳೆದ ಮಂಗಳವಾರ ಆಟೋದಲ್ಲಿ ಬರುತ್ತಿದ್ದಾಗ ಜೆಡಿಎಸ್ ಕಚೇರಿ ಬಳಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ದತ್ತ ಅವರಿಗೆ ಈ ಹಿಂದೆ ಸ್ಟಂಟ್ ಅಳವಡಿಸಲಾಗಿತ್ತು. ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos