‘ಯುವರತ್ನ’ ದಲ್ಲಿ ಬಹುನಟ ‘ರೈ’ ಎಂಟ್ರಿ

‘ಯುವರತ್ನ’ ದಲ್ಲಿ ಬಹುನಟ ‘ರೈ’ ಎಂಟ್ರಿ

ಬೆಂಗಳೂರು, ಜು. 2 : ಈಗಾಗಲೇ ‘ಯುವರತ್ನ’ ಚಿತ್ರಕ್ಕೆ ಅರ್ಧ ಚಿತ್ರೀಕರಣ ಮುಗಿದಿದೆ. ಇಲ್ಲಿ ಪುನೀತ್ ರಾಜ್ಕುಮಾರ್ ಅವರು ಕಾಲೇಜು ವಿದ್ಯಾರ್ಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಬಹುಭಾಷಾ ನಟ, ನಿರ್ದೇಶಕ ಪ್ರಕಾಶ್ ರೈ ಮತ್ತೆ ಪರದೆಗೆ ಮರಳಿದ್ದಾರೆ. ಕೆಲವು ತಿಂಗಳುಗಳಿಂದ ಲೋಕಸಭಾ ಚುನಾವಣೆಯಲ್ಲಿ ಬ್ಯುಸಿಯಾಗಿದ್ದ ಪ್ರಕಾಶ್ ರೈ, ಈಗ ಪವರ್ ಸ್ಟಾರ್ ಪುನೀತ್ರಾಜ್ಕುಮಾರ್ ಚಿತ್ರದ ಮೂಲಕ ಬಿಗ್ ಸ್ಕ್ರೀನ್ಗೆ ಎಂಟ್ರಿಯಾಗಿದ್ದಾರೆ. ಸಂತೋಷ್ ಆನಂದ್ ರಾಮ್ ನಿರ್ದೇಶನದ ‘ಯುವರತ್ನ’ ಚಿತ್ರದಲ್ಲಿ ಬಹು ಮುಖ್ಯವಾದ ಪಾತ್ರ ಮಾಡುತ್ತಿದ್ದಾರೆ. ಚಿತ್ರದಲ್ಲಿ ನಟ ಪ್ರಕಾಶ್ ರೈ ಕಾಲೇಜಿನ ಪ್ರಿನ್ಸಿಪಾಲ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್ ಆನಂದ್ ರಾಮ್ ಅವರೇ ಆ್ಯಕ್ಷನ್ ಕಟ್ ಹೇಳಿದ್ದರು. ‘ರಾಜಕುಮಾರ’ ಚಿತ್ರದಲ್ಲಿ ಪ್ರಕಾಶ್ ರೈ ಅವರು ವಿಲನ್ ಪಾತ್ರದಲ್ಲಿ ನಟಿಸಿದ್ದರು. ಆಗ ವಿಲನ್ ಆದವರು, ಈಗ ಅದೇ ಜೋಡಿಯ ಚಿತ್ರದಲ್ಲಿ ಪ್ರಿನ್ಸಿಪಾಲ್ ಆಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos