ಆಸ್ಪತ್ರೆಗೆ ದಾಖಲಾದ ಸಚಿವ ಜಮೀರ್ ಅಹಮದ್

ಆಸ್ಪತ್ರೆಗೆ ದಾಖಲಾದ ಸಚಿವ ಜಮೀರ್ ಅಹಮದ್

ಚಿತ್ರದುರ್ಗ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ರಂಗೇರಿತ್ತು ರಾಜ್ಯದಲ್ಲೇ ಅಭ್ಯರ್ಥಿಗಳು ಭರ್ಜರಿ ಮತಯಾಚಿಸುತ್ತಿದ್ದಾರೆ. ಸಚಿವ ಜಮೀರ್ ಅಹಮದ್ ಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆ ಸಚಿವರು ಇಂದು ಜಿಲ್ಲೆಗೆ ಆಗಮಿಸಿದ್ದರು. ಅಂತೆಯೇ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos